Saturday, March 15, 2008

ಸಾಹಿತ್ಯ

ಹರಿದಾಸರಸಂಘ ದೊರಕಿತು ಎನಗೀಗ ಇನ್ನೇನಿನ್ನೇನು
ವರಗುರು ಉಪದೇಶ ನೆರವಾಯ್ತು ಎನಗೆ ಇನ್ನೇನಿನ್ನೇನು
ಮಾಯದ ಸಂಸಾರ ಮಮಕಾರ ತಗ್ಗಿತು ಇನ್ನೇನಿನ್ನೇನು
ತೋಯಜಾಕ್ಷನ ನಾಮ ಜಿಹ್ವೆಯೊಳು ನೆಲೆಸಿತು ಇನ್ನೇನಿನ್ನೇನು
ಹಲವು ದೈವಗಳೆಂಬ ಹಂಬಲ ಬಿಟ್ಟಿತು ಇನ್ನೇನಿನ್ನೇನು
ಜಲಜನಾಭನ ಧ್ಯಾನ ಹೃದಯದೊಳು ದೊರಕಿತು ಇನ್ನೇನಿನ್ನೇನು
ತಂದೆತಾಯಿ ಮುಚುಕುಂದ ವರದನಾದ ಇನ್ನೇನಿನ್ನೇನು
ಸಂದೇಹವಿಲ್ಲ ಮುಕುಂದ ದಯಮಾಡ್ದ ಇನ್ನೇನಿನ್ನೇನು
ಏನೆಂದು ಹೇಳಲಿ ಆನಂದ ಸಂಭ್ರಮ ಇನ್ನೇನಿನ್ನೇನು
ಆ ನಂದಗೋಪನ ಕಂದನ ಮಹಿಮೆಯು ಇನ್ನೇನಿನ್ನೇನು
ಎನ್ನ ವಂಶಗಳೆಲ್ಲವು ಪಾವವಂಶಗಳೆಲ್ಲ ಪಾವನ ಆದವು ಇನ್ನೇನಿನ್ನೇನು
ಚಿನ್ಮಯ ಪುರಂದರವಿಠಲಯ್ಯ ದೊರಕಿದ ಇನ್ನೇನಿನ್ನೇನು!
****

No comments: